
ಕಾರ್ಕಳ: ಟೈಗರ್ಸ್ ಸಂಘಟನೆಯ ಆಶ್ರಯದಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಜುಲೈ 5, 2026ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಕಳದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬದ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ನೇತ್ರ ತಪಾಸಣೆ, ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ನಡೆಯಲಿದೆ. ವೈದ್ಯರಾದ ಡಾ. ಕಾರ್ತಿಕ್ ರಾವ್ (MD, DNB Medicine) ಅವರ ನೇತೃತ್ವದಲ್ಲಿ ಮದುಮೇಹ ಮತ್ತು ರಕ್ತದೊತ್ತಡ ತಪಾಸಣೆ ನಡೆಯಲಿದ್ದು, ಫಿಸಿಯೋಥೆರಪಿ ಹಾಗೂ ಅಕ್ಯುಪ್ರೆಶರ್ ಪ್ರಾತ್ಯಕ್ಷಿಕೆ ಇರಲಿದೆ. ಸಾರ್ವಜನಿಕರು ಈ ಉಚಿತ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.




