
ಉಡುಪಿ: ಸಾರ್ವಜನಿಕರ ಶಾಂತಿ ಕದಡಿಸುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ ೩ರಂದು ಉಡುಪಿ ನಗರ ಪೋಲಿಸ್ ಠಾಣೆ ಉಪನಿರೀಕ್ಷಕರಾದ ಭರತೇಶ್ ಕಂಕಣವಾಡಿ ರವರು ಸೋಷಿಯಲ್ ಮೀಡಿಯಾ ವೀಕ್ಷಿಸುತ್ತಿದ್ದಾಗ ವಾಟ್ಸಪ್ ಮುಖಾಂತರ ವಿಡಿಯೋ ಬಂದಿದ್ದು. ಕಂಜಾಲುವಿನಲ್ಲಿ ನಡೆದ ಗೋ ಹತ್ಯೆಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆಯನ್ನು ಶರಣ್ ಪಂಪ್ವೆಲ್ ವೀಡಿಯೋದಲ್ಲಿ ಹೇಳಿಕೆ ನೀಡಿರುತ್ತಾರೆ. ಈ ವೀಡಿಯೋ ಹಲವು ವಟ್ಸಾಪ್ ಗ್ರೂಪ್ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮುನ್ನ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುತ್ತಾರೆ.