
ಕೊಪ್ಪ: ಮಾಜಿ ಸಚಿವ ದಿ. ಗೋವಿಂದೇ ಗೌಡರ ಮನೆಯಲ್ಲಿ ಮನೆ ಕೆಲಸದವರಿಂದಲೇ ಕಳ್ಳತನ ನಡೆದಿದೆ. ನಗದು ಸಹಿತ ಚಿನ್ನಾಭರಣ ದೋಚಿ ಪರಾರಿಯಾಗಿರೋ ನೇಪಾಳ ಮೂಲದ ದಂಪತಿಗಳು. ಈ ದಂಪತಿ ಅನ್ನ ಕೊಟ್ಟ ಮನೆಗೆ ಕನ್ನ ಹಾಕಿದ್ದಾರೆ. ಅಂದಾಜು 07ಲಕ್ಷಕ್ಕೂ ಅಧಿಕ ನಗದು ಹಾಗೂ ಚಿನ್ನಾಭರಣವನ್ನು ದೋಚಿದ್ದಾರೆ ಎನ್ನಲಾಗಿದೆ. ಗೋವಿಂದೇ ಗೌಡರ ಪುತ್ರ ವೆಂಕಟೇಶ್ ವಾಸವಿರುವ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮಣಿಪುರ ಎಸ್ಟೇಟ್ನಲ್ಲಿ ಕಳ್ಳತನ ಮಾಡಲಾಗಿದೆ. ಕಳೆದ 15 ದಿನಗಳ ಹಿಂದಷ್ಟೆ ಕೆಲಸಕ್ಕೆ ಸೇರಿದ ನೇಪಾಳ ಮೂಲದ ದಂಪತಿಗಳು ಈ ಕೃತ್ಯ ಎಸಗಿದ್ದಾರೆ. ಮನೆಯವರು ನಿದ್ದೆಗೆ ಜಾರಿದಾ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣ ಸಂಬಂಧ ಕೊಪ್ಪ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.