ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಅವರಿಗೆ ಬರೆದ ಪತ್ರದಲ್ಲಿ, ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದು ಹಾಕುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿದ್ದು, ಹೊಸ ಕಾನೂನು ಉದ್ಯೋಗ ಖಾತರಿ ಚೌಕಟ್ಟನ್ನು ಮತ್ತು ಸಹಕಾರಿ ಒಕ್ಕೂಟವನ್ನು ಹಾಗೂ ಹೊಸ ಕಾಯ್ದೆಯು ಗ್ರಾಮೀಣ ಕುಟುಂಬಗಳಿಗೆ ನಿರ್ಣಾಯಕ ಜೀವನೋಪಾಯದ ಹಕ್ಕನ್ನು ಕಸಿದುಕೊಳ್ಳುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
