
ಶಿಕಾರಿಪುರ: ಚಿರತೆಯೊಂದು ಕಳೆಬರಹವು ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿಯಲ್ಲಿ ಗೊಗ್ಗದ ರಾಜ್ಯ ಅರಣ್ಯ ನಂ ೧೯೭ರಲ್ಲಿ ಎಂಪಿಎಂ ನಡುತೋಪಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಚಿರತೆಯನ್ನು ಮೂರು ವರ್ಷದ ವಯಸ್ಸಿನ ಗಂಡು ಚಿರತೆಯೆಂದು ಅಧಿಕಾರಿಗಳು ಊಹಿಸಿದ್ದಾರೆ. ಆದರೆ ಇದರ ಸಾವಿಗೆ ಕಾರಣವೇನೆಂದು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ತಿಳಿದು ಬರಬೇಕಿದೆ ಎಂದು ಉಪ ಅರಣ್ಯ ಸಂರಕ್ಷಣ ಅಧಿಕಾರಿ ಡಿ. ಮೋಹನ್ ಕುಮಾರ್ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು. ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರ್ ನಡೆಸಿದ್ದಾರೆ ಎನ್ನಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಎಸ್ ರವೀಂದ್ರ ನಾಯ್ಕ ತಹಶೀಲ್ದಾರ್ ಮಂಜುಳಾ ಶಂಕರ ಭಜಂತ್ರಿ, ಗ್ರಾಮ ಪಂಚಾಯಿತ ಉಪಾಧ್ಯಕ್ಷ ಗುರುಸಿದ್ದಪ್ಪ, ಹುಲಿ ಸಿಂಹಧಾಮದ ವೈದ್ಯಾಧಿಕಾರಿ ಮುರುಳಿ ಮನೋಹರ್, ಮುಖ್ಯ ಪಶುವೈದ್ಯಾಧಿಕಾರಿ ಡಾ|| ರವಿ, ಡಾ|| ಸುನೀಲ್ ಹಾಗೂ ನಿಸರ್ಗ ಕನ್ಸರ್ವೇಶನ್ ಟ್ರಸ್ಟ್ನ ಜಿ.ಎನ್ ಅರುಣ್ ಕುಮಾರ್ ಇನ್ನಿತರ ಸಿಬ್ಬಂದಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು